ಮಾನನಷ್ಟ ಪ್ರಕರಣ: ಕೇಜ್ರಿವಾಲ್ ದೋಷಮುಕ್ತಿ

Update: 2018-11-05 18:27 GMT

   ಹೊಸದಿಲ್ಲಿ,ನ.5: ಮಾನನಷ್ಟ ಪ್ರಕರಣವೊಂದರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದಿಲ್ಲಿಯ ನ್ಯಾಯಾಲಯವು ಸೋಮವಾರ ದೋಷಮುಕ್ತಗೊಳಿಸಿದೆ.ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರ ಮಾಜಿ ಸಹಾಯಕಿಯೊಬ್ಬರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

 ಪ್ರಕರಣದ ವಿಚಾರಣೆ ನಡೆಸಿ, ಇಂದು ತೀರ್ಪು ನೀಡಿದ ದಿಲ್ಲಿ ನ್ಯಾಯಾಲಯವು ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರನ್ನು ದೋಷಮುಕ್ತಗೊಳಿಸಿತು.

 2012ರ ಅಕ್ಟೋಬರ್‌ನಲ್ಲಿ ವಿದ್ಯುತ್‌ ದರ ಏರಿಕೆ ವಿರುದ್ಧ ಎಎಪಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಕೇಜ್ರಿವಾಲ್ ಅವರು ಆಗಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಆಕ್ಷೇಪಕಾರಿಯಾದ ಮಾತು ಗಳನ್ನು ಆಡಿದ್ದಾರೆಂದು, ದೀಕ್ಷಿತ್ ಅವರ ಆಗಿನ ಕಾರ್ಯದರ್ಶಿ ಪವನ್ ಖೇರಾ ಆಪಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News