ಮಂಡ್ಯ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Update: 2018-11-07 18:28 GMT
ಸಾಂದರ್ಭಿಕ ಚಿತ್ರ

ಮಂಡ್ಯ, ನ.7: ಶಿಂಷಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮುಳುಗಿ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ನಡೆದಿದೆ.

ಕನಕಪುರ ತಾಲೂಕಿನ ಸೀಗೆಕೋಟೆ ಗ್ರಾಮದ ಗೋಪಿಕೃಷ್ಣ ಮೃತ ದುರ್ದೈವಿ. ಈತ  ಮಂಗಳವಾರ ಮಧ್ಯಾಹ್ನ ಈಜುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ವಿಚಾರ ತಿಳಿದ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರತೆಗೆದು ವಾರಸುದಾರರಿಗೆ ಒಪ್ಪಿಸಿದರು.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News