ದೇವೇಗೌಡರ ಹೆಸರಲ್ಲಿ ಕೃಷಿ ವಿವಿ ಪ್ರಶಸ್ತಿ
Update: 2018-11-08 15:46 GMT
ಬೆಂಗಳೂರು, ನ. 8: ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ರಂಗಚೇತನ ಸಂಸ್ಕೃತಿ ಕೇಂದ್ರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಅಂಗೀಕರಿಸಿ ಒಪ್ಪಿಗೆ ನೀಡಿದ್ದು, ನ.15ರಿಂದ ಜಿಕೆವಿಕೆ ಆವರಣದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಸಾಧಕರಿಗೆ ಮಾಜಿ ಪ್ರಧಾನಿ ದೇವೇಗೌಡ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಕೃಷಿ ವಿವಿ ಕುಲಪತಿಗಳು ತಿಳಿಸಿದ್ದಾರೆ.