ಕೊಲ್ಲೂರು: ಬಸ್ಸಿನಿಂದ ಬಿದ್ದು ಪ್ರಯಾಣಿಕ ಮೃತ್ಯು

Update: 2018-11-08 15:53 GMT

ಕೊಲ್ಲೂರು, ನ.8: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ವಂಡ್ಸೆ ಗ್ರಾಮದ ಶಾರ್ಕೆ ಬೊಬ್ಬರ್ಯ ದೇವಸ್ಥಾನದ ತಿರುವಿನ ಬಳಿ ನ.7ರಂದು ಪೂರ್ವಾಹ್ನ 11:30ರ ಸುಮಾರಿಗೆ ನಡೆದಿದೆ.

 ಮೃತರನ್ನು ನಾರಾಯಣ ಭಟ್(60) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಕೊಲ್ಲೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನಾರಾಯಣ ಭಟ್ ಆಯತಪ್ಪಿಬಸ್ಸಿನ ಹಿಂಬದಿ ಬಾಗಿಲಿನಿಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ಅವರು ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ದಾರಿಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News