ಸಾಲಬಾಧೆ: ರೈತ ಆತ್ಮಹತ್ಯೆ

Update: 2018-11-08 16:35 GMT

ಕೆ.ಆರ್.ಪೇಟೆ, ನ.8: ಸಾಲಬಾಧೆ ತಾಳಲಾರದೆ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿದ್ದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಾಲೂಕಿನ ಹರಿಹರಪುರದಲ್ಲಿ ನಡೆದಿದೆ.

ಜವರೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಒಂದೂವರೆ ಎಕರೆ ಕೃಷಿ ಭೂಮಿಯಲ್ಲಿ ಬಾಳೆ ಮತ್ತು ತೆಂಗನ್ನು ಬೆಳೆದಿದ್ದರು. ಕೃಷಿಗಾಗಿ ಕೃಷಿ ಪತ್ತಿನ ಸಹಕಾರ ಬ್ಯಾಂಕಿನಲ್ಲಿ 50 ಸಾವಿರ ರೂ. ಸಾಲ ಸೇರಿದಂತೆ 2 ಲಕ್ಷ ರೂ. ಕೈ ಸಾಲ ಮಾಡಿದ್ದರು ಎನ್ನಲಾಗಿದೆ.

ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News