ನ.9ರಂದು 268ನೆ ಟಿಪ್ಪು ಜಯಂತಿ ಕಾರ್ಯಕ್ರಮ
Update: 2018-11-08 17:14 GMT
ಬೆಂಗಳೂರು, ನ.8: ಭಾರತೀಯ ಸ್ವಾತಂತ್ರ ಸಂಗ್ರಾಮದ ಪ್ರಥಮ ಹೋರಾಟಗಾರ ಮೈಸೂರು ಹುಲಿ ಟಿಪ್ಪು ಸುಲ್ತಾನ್ರ 268ನೆ ಜಯಂತಿ ಹಾಗೂ 63ನೆ ಕನ್ನಡ ರಾಜ್ಯೋತ್ಸವದ ಜತೆಗೆ ಟಿಪ್ಪು ಸುಲ್ತಾನ್ ಏಕತಾ ಪ್ರಶಸ್ತಿ ಕಾರ್ಯಕ್ರಮವನ್ನು ನ.9ರಂದು ನಗರದ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯಲ್ಲಿ ಬಿಎಆರ್ಡಿಡಿಎ ಹಮ್ಮಿಕೊಂಡಿದೆ.
ಕೋಟೆ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಶೇಷಾದ್ರಿ ಭಟ್ ಟಿಪ್ಪು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಖಿಲ ಕರ್ನಾಟಕ ಸೂಫಿ ಸಂತರ ಸಂಘದ ಅಧ್ಯಕ್ಷ ಸೂಫಿ ವಲಿಬಾ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಡಾ.ಗುಲ್ಷಾದ ಅಹ್ಮದ್, ಬಿಎಆರ್ಡಿಡಿಎ ಅಧ್ಯಕ್ಷ ಶೇಖ್ ಅಹ್ಮದ್ ಜಯಂತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.