ಟಿಪ್ಪು ಜಯಂತಿ ವಿರೋಧಿಸಿ ಬಜರಂಗದಳದಿಂದ ಮನವಿ

Update: 2018-11-08 18:01 GMT

ಮಂಗಳೂರು,ನ. 8: ರಾಜ್ಯ ಸರಕಾರ ನ.10ರಂದು ಟಿಪ್ಪು ಜಯಂತಿ ಆಚರಿಸಲು ತೆಗೆದುಕೊಂಡಿರುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಬಜರಂಗದಳ ಸರಕಾರವನ್ನು ಆಗ್ರಹಿಸಿದೆ.

ಟಿಪ್ಪು ಸುಲ್ತಾನ್ ಹಿಂದೂ ವಿರೋಧಿಯಾಗಿದ್ದ ಎಂದು ಆರೋಪಿಸಿರುವ ಬಜರಂಗ ದಳ, ಇಂತಹ ರಾಜನ ಜಯಂತಿಯನ್ನು ಸರಕಾರ ಆಚರಿಸಲು ನಿರ್ಧರಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿ ಮಂಗಳೂರು ಪೊಲೀಸ್ ಕಮಿಷನರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿದ ನಿಯೋಗದಲ್ಲಿ ಬಜರಂಗದಳ ಮುಖಂಡರಾದ ಭುಜಂಗ ಕುಲಾಲ್, ಪ್ರವೀಣ್ ಕುತ್ತಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News