ಪ್ರೇಕ್ಷಣೀಯ ತಾಣದಲ್ಲಿ ಕುಡುಕರ ಹಾವಳಿ

Update: 2018-11-08 18:06 GMT

ಮಾನ್ಯರೇ,

ರಾಜ್ಯದ ಪ್ರಮುಖ ಐತಿಹಾಸಿಕ ಪ್ರೇಕ್ಷಣೀಯ ತಾಣಗಳಲ್ಲಿ ಒಂದಾಗಿರುವ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಕುಡುಕರ ಮತ್ತು ದನಕರುಗಳ ಹಾವಳಿ ಹೆಚ್ಚುತ್ತಿದೆ. ನಗರದ ಕೇಂದ್ರ ಬಸ್ಸು ನಿಲ್ದಾಣ ಸೇರಿದಂತೆ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ಕಂಠ ಪೂರ್ತಿ ಕುಡಿದು ನಗರದ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಬಂದ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ. ಇನ್ನೊಂದೆಡೆ ಜಾನುವಾರುಗಳು ಕೂಡಾ ರಸ್ತೆಗಳಲ್ಲೇ ಮಲಗಿಕೊಂಡು ವಾಹನಗಳ ಒಡಾಟಕ್ಕೆ ತೊಂದರೆ ಉಂಟು ಮಾಡುತ್ತಿವೆ. ಹೀಗಾಗಿ ಅಪಘಾತ ಆಗುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು ಕೂಡಲೇ ಇತ್ತ ಗಮನ ಹರಿಸಿ ಕುಡುಕರ ಹಾಗೂ ಜಾನುವಾರುಗಳ ಹಾವಳಿಯಿಂದ ತಪ್ಪಿಸಿ, ಸಾರ್ವಜನಿಕರು ಮುಕ್ತವಾಗಿ ಓಡಾಡಲು ಅವಕಾಶ ಮಾಡಿಕೊಡಬೇಕು.

Writer - -ಮೌಲಾಲಿ ಕೆ. ಆಲಗೂರ, ಸಿಂದಗಿ

contributor

Editor - -ಮೌಲಾಲಿ ಕೆ. ಆಲಗೂರ, ಸಿಂದಗಿ

contributor

Similar News