ಕಾರು ಢಿಕ್ಕಿ: ವಿದ್ಯುತ್ ಕಂಬ, ತಂತಿಗೆ ಹಾನಿ

Update: 2018-11-09 16:14 GMT

ಕಾಪು, ನ.9: ಮೂಡಬೆಟ್ಟು ಗ್ರಾಮದ ಕಟ್ಟೆಕೆರೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ತಿರುವಿನ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.8ರಂದು ಬೆಳಗಿನ ಜಾವ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮತ್ತು ತಂತಿ ಗಳಿಗೆ ಹಾನಿಯಾಗಿ ಸಾವಿರಾರು ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿ ಯಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿರುವ ಕಟಪಾಡಿ ಮೆಸ್ಕಾಂ ನಿಯಮಿತಕ್ಕೆ ಒಳಪಟ್ಟಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತು. ಇದರಿಂದ ವಿದ್ಯುತ್ ಕಂಬ ಮತ್ತು ತಂತಿಗಳಿಗೆ ಹಾನಿಯಾಗಿ ಮೆಸ್ಕಾಂಗೆ 29,000ರೂ. ನಷ್ಟವಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News