ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Update: 2018-11-10 16:28 GMT

ಕುಂದಾಪುರ, ನ. 9: ಸುಮಾರು 6 ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಕೊಲ್ಲೂರು ವಸತಿಗೃಹವೊಂದರಲ್ಲಿ ಅತ್ಯಾ ಚಾರ ಎಸಗಿದ ಆರೋಪಿಗೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 50ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಕುಮಟಾ ಧಾರೇಶ್ವರ ನಿವಾಸಿ ನಾಗರಾಜ ಮಹಾದೇವ ಹರಿಕಾಂತ ಶಿಕ್ಷೆಗೆ ಗುರಿಯಾದ ಆರೋಪಿ. ನಾಗರಾಜ ಹೊನ್ನಾವರ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗುವ ಭರವಸೆ ನೀಡಿದ್ದನು. 2013ರ ಜನವರಿಯಲ್ಲಿ ಆಕೆಯನ್ನು ಕೊಲ್ಲೂರಿಗೆ ಕರೆದುಕೊಂಡು ಬಂದು ಅಲ್ಲಿನ ವಸತಿಗೃಹವೊಂದರಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಒಂದು ತಿಂಗಳ ಬಳಿಕ ನಾಗರಾಜ ಬೇರೆಯವರ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಹಿನ್ನೆಲೆ ಯಲ್ಲಿ ಸಂತ್ರಸ್ತ ಯುವತಿ ನಾಗರಾಜ್ ವಿರುದ್ಧ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ನಾಗರಾಜ್‌ನನ್ನು ದೋಷಿ ಎಂಬು ದಾಗಿ ನ.8ರಂದು ಘೋಷಿಸಿ ಶಿಕ್ಷೆಯ ಪ್ರಮಾಣವನ್ನು ನ.9ರಂದು ಪ್ರಕಟಿಸು ವುದಾಗಿ ತಿಳಿಸಿತು. ಅದರಂತೆ ಬಲಾತ್ಕಾರ, ನಂಬಿಕೆ ದ್ರೋಹ ಪ್ರಕರಣದಡಿ ಆರೋಪಿಗೆ 10 ವರ್ಷಗಳ ಕಠಿಣ ಸಜೆ ಮತ್ತು 50ಸಾವಿರ ರೂ. ದಂಡ ವಿಧಿಸ ಲಾಯಿತು. ಪ್ರಾಸಿಕ್ಯೂಷನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News