ಬೈಕ್ ಅಪಘಾತ: ಸಹಸವಾರ ಮೃತ್ಯು
Update: 2018-11-10 16:29 GMT
ಕಾಪು, ನ.10: ಬೈಕೊಂದು ರಸ್ತೆ ಮಧ್ಯೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನ ಹಿಂಬದಿ ಸವಾರ ಮೃತಪಟ್ಟ ಘಟನೆ ಮೂಳೂರು ಎಸ್.ಎಂ. ನರ್ಸರಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.9ರಂದು ಮಧ್ಯರಾತ್ರಿ ವೇಳೆ ನಡೆದಿದೆ.
ಮೃತರನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಸವಾರ ಎಲ್ಲೂರು ಸಾಣಿಂಜೆ ನಿವಾಸಿ ಸೂರಜ್(22) ಎಂಬವರು ಗಾಯಗೊಂಡಿದ್ದಾರೆ. ಇವರು ಬೈಕ್ನಲ್ಲಿ ಕಾಪು ಮೆಹಂದಿ ಕಾರ್ಯಕ್ರಮಕ್ಕೆ ಬರುತ್ತಿದ್ದಾಗ ಬೈಕ್ ಡಿವೈಡರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡ ಕಾರ್ತಿಕ್ ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.