ದಾವಣಗೆರೆ: ಕೆಎಸ್‍ಆರ್‍ಟಿಸಿ ಬಸ್ ಢಿಕ್ಕಿ; ಪಾದಚಾರಿ ಬಾಲಕ ಸಾವು

Update: 2018-11-10 16:49 GMT

ದಾವಣಗೆರೆ,ನ.10: ಕೆಎಸ್‍ಆರ್‍ಟಿಸಿ ಬಸ್ಸೊಂದು ಢಿಕ್ಕಿಯೊಡೆದ ಪರಿಣಾಮ ಪಾದಚಾರಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬ್ಯಾಲದಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮಾಯಕೊಂಡ ಗ್ರಾಮದ ಕಿಶೋರ್ (14) ಮೃತ ಯುವಕ. ಹರಿಹರದಿಂದ ಉಕ್ಕಡಗಾತ್ರಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ದಾಟುತ್ತಿದ್ದ ಕಿಶೋರ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಕಿವಿ-ಮೂಗಿನಲ್ಲಿ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೆಎಸ್‍ಆರ್‍ಟಿಸಿ ಬಸ್ಸಿನ ಗಾಜನ್ನು ಹೊಡೆದು ಹಾಕಿದರು. ಈ ಕುರಿತು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News