ದಾವಣಗೆರೆ: ಮರಕ್ಕೆ ಕಾರು ಢಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

Update: 2018-11-10 16:52 GMT

ದಾವಣಗೆರೆ,ನ.10: ನಗರದ ಹೊರವಲಯದ ಬೇತೂರು ಗ್ರಾಮದ ಬಳಿಯ ಮರವೊಂದಕ್ಕೆ ಕಾರು ಢಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಚಾಲಕ ಸಿದ್ದೇಶ್ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಸಿದ್ದೇಶ್ ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ದಾವಣಗೆರೆಯಿಂದ ಜಗಳೂರಿಗೆ ತೆರಳುತ್ತಿದ್ದ ಸಂದರ್ಭ ಆಯತಪ್ಪಿ ಬೇತೂರಿಗೆ ಗ್ರಾಮದ ಬಳಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಚಾಲಕನ ಸಿದ್ದೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹಿಂಬದಿ ಕುಳಿತಿದ್ದ ಮೂರು ಮಂದಿಗೆ ಸಣ್ಣ ಪಟ್ಟ ಗಾಯಗಳಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ದಾವಣಗೆರೆ ಪೊಲೀಸ್ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News