ಚಿಕ್ಕಮಗಳೂರು: ಕೆರೆಯಲ್ಲಿ ರುಂಡವಿಲ್ಲದ ದೇಹ ಪತ್ತೆ

Update: 2018-11-10 17:28 GMT

ಚಿಕ್ಕಮಗಳೂರು, ನ.10: ಅಪರಿಚಿತ ವ್ಯಕ್ತಿಯ ರುಂಡವಿಲ್ಲದ ಶವವೊಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬುಕ್ಕಾಂಬುದಿ ಕೆರೆಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದ್ದು, ವ್ಯಕ್ತಿಯನ್ನು ಕೊಲೆ ಮಾಡಿ ರುಂಡ ಕತ್ತಿರಿಸಿ ದೇಹವನ್ನು ಕೆರೆಗೆ ಎಸೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. 

ಕೊಲೆಯಾದ ವ್ಯಕ್ತಿಯ ರುಂಡವನ್ನು ಕತ್ತರಿಸಲಾಗಿದ್ದು, ಮೃತರು ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯನ್ನು ದುಷ್ಕರ್ಮಿಗಳು ಬೇರೆ ಕಡೆ ಕೊಲೆ ಮಾಡಿ ರುಂಡ ಕತ್ತರಿಸಿದ್ದಾರೆ. ನಂತರ ಮೃತ ದೇಹವನ್ನು ಕೆರೆಗೆ ಎಸೆದು ಪರಾರಿಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತನ ರುಂಡಕ್ಕಾಗಿ ಶುಕ್ರವಾರ ಕೆರೆ ಹಾಗೂ ಕೆರೆ ಸಮೀಪದಲ್ಲಿ ಹುಡುಕಾಟ ನಡೆಸಿದರು. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News