ಅನಂತ್ ಕುಮಾರ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ
Update: 2018-11-12 13:33 GMT
ಹೊಸದಿಲ್ಲಿ,ನ.12: ಕೇಂದ್ರ ಸಚಿವ ಎಚ್.ಎನ್.ಅನಂತ್ ಕುಮಾರ್ ನಿಧನಕ್ಕೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
'ಇಂದು ಬೆಳಗ್ಗೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಬೆಂಗಳೂರಿನಲ್ಲಿ ನಿಧನರಾದರೆಂದು ಕೇಳಿ ಬೇಸರವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪವಿದೆ. ಅನಂತ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.