ನ್ಯಾಷನಲ್ ಕಾಲೇಜು ಮೈದಾನದಲ್ಲಿ ಭದ್ರತೆ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

Update: 2018-11-12 14:04 GMT

ಬೆಂಗಳೂರು, ನ.12: ಕೇಂದ್ರ ಸಚಿವ ಎಚ್.ಎನ್.ಅನಂತ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮಂಗಳವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರ ಪೂರ್ವ ಸಿದ್ಧತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಹಾಗೂ ಗಣ್ಯರಿಗೆ ಅವಕಾಶ ಮಾಡಿಕೊಡಲು ಬಿಬಿಎಂಪಿ ಹಾಗೂ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

ಮಂಗಳವಾರ ಕೇಂದ್ರದ ಗೃಹ ಸಚಿವರು, ಉಪರಾಷ್ಟ್ರಪತಿ ಸೇರಿದಂತೆ ಕೇಂದ್ರದ ಅನೇಕ ಸಚಿವರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ಮೈದಾನವನ್ನು ಪರಿಶೀಲಿಸಲಾಗಿದೆ. ನಾಳೆ ಎರಡೂವರೆ ಗಂಟೆಗಳ ಕಾಲ ದರ್ಶನಕ್ಕೆ ಅವಕಾವಿರಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News