ಬೆಂಗಳೂರು: ಜೀಪ್‌ ಪಲ್ಟಿಯಾಗಿ ಪೊಲೀಸ್ ಪೇದೆ ಮೃತ್ಯು

Update: 2018-11-12 14:17 GMT

ಬೆಂಗಳೂರು, ನ.12: ಜೀಪ್‌ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಜೋಗಿ ಕ್ರಾಸ್ ಬಳಿ ನಡೆದಿದೆ ಎನ್ನಲಾಗಿದೆ.

ಇಂಡಿ ತಾಲೂಕಿನ ಅರ್ಜುಣಗಿ ಬಿ.ಕೆ.ಗ್ರಾಮದ ದ್ವಾರಕೀಶ್ ಹಣಮಂತ ದೇವಖಾತೆ ಎಂಬುವರು ಮೃತಪಟ್ಟ ಪೊಲೀಸ್ ಪೇದೆ ಎಂದು ತಿಳಿದುಬಂದಿದೆ.

ಪೊಲೀಸ್ ಪೇದೆ ದ್ವಾರಕೀಶ್, ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಘಟನೆಯಲ್ಲಿ ತಲೆಗೆ ಪೆಟ್ಟು, ಕಾಲು ಮುರಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಚಾಲಕ ಮಂಜುನಾಥ್ ಎಂಬುವರಿಗೂ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News