ಶಿವಮೊಗ್ಗ: ಟ್ಯಾಂಕರ್ ಢಿಕ್ಕಿ; ಬೈಕ್ ಸವಾರರಿಬ್ಬರು ಸಾವು
Update: 2018-11-12 16:34 GMT
ಶಿವಮೊಗ್ಗ, ನ. 12: ವೇಗವಾಗಿ ಆಗಮಿಸಿದ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಹಾರ್ನಳ್ಳಿ - ಸವಳಂಗ ರಸ್ತೆಯಲ್ಲಿ ರವಿವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ಮುದುವಾಲ ಗ್ರಾಮದ ನಿವಾಸಿಗಳಾದ ಹನುಮಂತಪ್ಪ (27) ಹಾಗೂ ಸ್ವಾಮಿರಾಜ್ (26) ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಚಾಲಕನ ಅಜಾಗರೂಕ, ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎಂದು ತಿಳಿದುಬಂದಿದ್ದು, ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.