ಅಪಘಾತ: ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

Update: 2018-11-12 16:37 GMT

ಮಂಗಳೂರು, ನ.12: ಹೊನ್ನಕಟ್ಟೆಯಲ್ಲಿ ರವಿವಾರ ನಡೆದ ಬೈಕ್ ಅಪಘಾತದಲ್ಲಿ ಉಳ್ಳಾಲ ಸುಭಾಷ್ ನಗರ ನಿವಾಸಿ ಶೇಖರ್ ಎಂಬವರ ಪುತ್ರ ಅಕ್ಷಯ್ (23) ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಇದೇ ಅಪಘಾತದಲ್ಲಿ ಪಾದಚಾರಿ ಹೊನ್ನಕಟ್ಟೆ ಕೋಡಿಕೆರೆಯ ನಾರಾಯಣ ಕುಲಾಲ್ (65)ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದರು. ಬೈಕ್ ಸವಾರ ಅಕ್ಷಯ್ ಮಂಗಳೂರಿನಿಂದ ಸುರತ್ಕಲ್ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಹೊನ್ನಕಟ್ಟೆ ಸಿಗ್ನಲ್ ಬಳಿ ರಸ್ತೆ ದಾಟುತ್ತಿದ್ದ ನಾರಾಯಣ ಎಂಬವರಿಗೆ ಢಿಕ್ಕಿ ಹೊಡೆದು ಬಳಿಕ ಬೈಕ್ ರಸ್ತೆ ವಿಭಾಜಗಕ್ಕೆ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಪಾದಚಾರಿ ನಾರಾಯಣ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದ ಅಕ್ಷಯ್‌ ಕುಮಾರ್ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಕುರಿತು ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News