ನೋಟು ನಿಷೇಧ ಅಸಮರ್ಪಕ ಅನುಷ್ಠಾನ: ರಜನಿಕಾಂತ್

Update: 2018-11-12 16:44 GMT

ಚೆನ್ನೈ, ನ. 12: ನೋಟು ನಿಷೇಧವನ್ನು ಈ ಹಿಂದೆ ಸ್ವಾಗತಿಸಿದವರಲ್ಲಿ ಒಬ್ಬರಾದ ಸೂಪರ್ ಸ್ಟಾರ್ ರಜನಿಕಾಂತ್, ಸೋಮವಾರ ಕೇಂದ್ರ ಸರಕಾರ ನೋಟು ನಿಷೇಧವನ್ನು ಸರಿಯಾಗಿ ಅನುಷ್ಠಾನಕ್ಕೆ ತಂದಿಲ್ಲ ಎಂದಿದ್ದಾರೆ.

ನಗದು ನಿಷೇಧ ಯೋಜನೆಯನ್ನು ಕೇಂದ್ರ ಸರಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ. ಇದರ ಬಗ್ಗೆ ನಾವು ಸಾಕಷ್ಟು ಚರ್ಚೆ ಮಾಡಬೇಕಾಗಿದೆ ಎಂದು ರಜನಿಕಾಂತ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಸಂಘಟಿತರಾಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಜನಿಕಾತ್, ‘‘ಬಿಜೆಪಿ ಅಪಾಯಕಾರಿ ಎಂದು ಭಾವಿಸಿರುವುದರಿಂದ, ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಸಂಘಟಿತರಾಗುತ್ತಿವೆ.’’ ಎಂದರು. ರಾಜೀವ್ ಹತ್ಯೆ ಪ್ರಕರಣದ ಏಳು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ತನಗೆ ಏನೂ ತಿಳಿದಿಲ್ಲ ಎಂದು ರಜನಿಕಾಂತ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News