ಅನಂತಕುಮಾರ್ ಅಂತಿಮ ದರ್ಶನ ಪಡೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Update: 2018-11-13 06:59 GMT

 ಬೆಂಗಳೂರು, ನ.13: ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ನಿಧನರಾದ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಇಡಲಾಗಿದೆ.

ಮಂಗಳವಾರ ಬೆಳಗ್ಗೆ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅನಂತಕುಮಾರ್‌ಗೆ ಅಂತಿಮ ನಮನ ಸಲ್ಲಿಸಿದರು. ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಸೋಮವಾರವಿಡೀ ಅನಂತಕುಮಾರ್ ಪಾರ್ಥಿವ ಶರೀರವನ್ನು ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ಇಡಲಾಗಿತ್ತು. ಮಂಗಳವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಬಳಿಕ ನ್ಯಾಶನಲ್ ಮೈದಾನಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ವೈದಿಕ ಸಂಪ್ರದಾಯದಂತೆ ಅನಂತ ಕುಮಾರ್ ಅಂತ್ಯ ಸಂಸ್ಕಾರ ನೆರವೇರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News