ಮೂಡುಬಿದಿರೆ: ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2018-11-13 16:01 GMT

ಮೂಡುಬಿದಿರೆ, ನ. 13: ಕಲ್ಲಬೆಟ್ಟು ಮಾರಿಗುಡಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಕರಿಂಜೆ ಗ್ರಾಮದ ಗೋವುಗುಡ್ಡೆ ನಿವಾಸಿ ಲಿಂಗಪ್ಪ ದೇವಾಡಿಗ (62)ಎಂದು ಗುರುತಿಸಲಾಗಿದೆ.

ಅವರು ಮೂಡುಬಿದಿರೆಯ ಮುಖ್ಯ ರಸ್ತೆ ಬಳಿ  ವಾಚ್ ಅಂಗಡಿಯನ್ನು ಹೊಂದಿದ್ದರು. ಎಂದಿನಂತೆ ಮಂಗಳವಾರ ಬೆಳಗ್ಗೆ ಮನೆಯಿಂದ ಅಂಗಡಿಗೆಂದು ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕಲ್ಲಬೆಟ್ಟುನಲ್ಲಿ ಮೂಡುಬಿದಿರೆಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ದ್ವಿಚಕ್ರವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಲಿಂಗಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News