ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಸಂಘ ಪರಿವಾರ ಕರೆ ನೀಡಿದ್ದ ಕೊಡಗು ಬಂದ್‌ಗೆ ನೀರಸ ಪ್ರತಿಕ್ರಿಯೆ

Update: 2018-11-14 08:45 GMT

ಸಿದ್ದಾಪುರ (ಕೊಡಗು), ನ.14: ಪ್ರವಾದಿಯನ್ನು ಅವಹೇಳನ ಮಾಡಿದ ಆರೋಪದಲ್ಲಿ ಅಂಕಣಕಾರ ಸಂತೋಷ್ ತಮ್ಮಯ್ಯ ಬಂಧನವನ್ನು ಖಂಡಿಸಿ ಸಂಘ ಪರಿವಾರದ ಸಂಘಟನೆಗಳು ಕರೆ ನೀಡಿದ್ದ ಒಂದು ಗಂಟೆ ಕೊಡಗು ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಧ್ಯಾಹ್ಯ 12 ಗಂಟೆಯಿಂದ 1 ಗಂಟೆಯ ವರೆಗೆ ಬಂದ್‌ಗೆ ಸಂಘ ಪರಿವಾರದ ಸಂಘಟನೆಗಳು ಕರೆ ನೀಡಿತ್ತು. ಆದರೆ ಜಿಲ್ಲೆಯಾದ್ಯಂತ ವರ್ತಕರು ಅಂಗಡಿ ಮುಂಗಟ್ಟುಗಳು ತೆರೆದು ಎಂದಿನಂತೆ ತಮ್ಮ ವ್ಯಾಪಾರ ವಹಿವಾಟು ಮುಂದುವರಿಸಿದರು. ಮುಂಜಾಗೃತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಬಂಧನಕ್ಕೊಳಗಾಗಿದ್ದ ಸಂತೋಷ್ ತಮ್ಮಯ್ಯ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News