ಶಿರಾಡಿ ಘಾಟಿ: ನ.15ರಿಂದ ಘನವಾಹನಗಳಿಗೆ ಸಂಚಾರಮುಕ್ತ

Update: 2018-11-14 10:26 GMT

ಮಂಗಳೂರು, ನ.14: ಶಿರಾಡಿ ಘಾಟಿ ಹೆದ್ದಾರಿಯಲ್ಲಿ ನಾಳೆಯಿಂದ (ನ.15) ಎಲ್ಲಾ ರೀತಿಯ ಘನ ವಾಹನಗಳಿಗೆ ಸಂಚಾರ ಮುಕ್ತಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶಿರಾಡಿ ಘಾಟಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರದಿಂದ ರಸ್ತೆ ಕ್ಷಮತೆ ಹಾಗೂ ಸುರಕ್ಷತೆ ಬಗ್ಗೆ ಈಗಾಗಲೇ ದ.ಕ. ಹಾಗೂ ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ  ಶಿರಾಡಿ ಘಾಟಿ ರಸ್ತೆ ಸದೃಢವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆಯಿಂದಲೇ ಘನ ವಾಹನಗಳಿಗೆ ಶಿರಾಡಿ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News