ನ.16, 17ರಂದು ಕರಾವಳಿ ಜಿಲ್ಲೆಗಳಲ್ಲಿ ಸಾರಿಗೆ ಸಚಿವರು ಪ್ರವಾಸ

Update: 2018-11-14 15:00 GMT

ಉಡುಪಿ, ನ.14: ರಾಜ್ಯ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ನ.16 ಮತ್ತು 17ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ನ.15ರ ರಾತ್ರಿ 10ಗಂಟೆಗೆ ಶಿವಮೊಗ್ಗದಿಂದ ಬೈಂದೂರಿಗೆ ಆಗಮಿಸಿ ಅಲ್ಲಿ ವಾಸ್ತವ್ಯ ಮಾಡುವ ಸಚಿವರು, 16ರ ಶುಕ್ರವಾರ ಬೆಳಗ್ಗೆ 9 ಕ್ಕೆ ಬೈಂದೂರಿನಲ್ಲಿ ನಿರ್ಮಾಣಗೊಳ್ಳುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸುವರು. 10ಕ್ಕೆ ಕುಂದಾಪುರಕ್ಕೆ ನಿರ್ಗಮಿಸುವ ಸಚಿವರು 11ಕ್ಕೆ ಕುಂದಾಪುರದ ಕೆಎಸ್ಸಾರ್ಟಿಸಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸುವರು.

ಅಪರಾಹ್ನ 12ಕ್ಕೆ ಕುಂದಾಪುರದಿಂದ ಮಂಗಳೂರಿಗೆ ತೆರಳುವ ಡಿ.ಸಿ.ತಮ್ಮಣ್ಣ, ಮರುದಿನ ಬೆಳಗ್ಗೆ 9:00ಕ್ಕೆ ಮಂಗಳೂರು ಬಸ್ ನಿಲ್ದಾಣ ಹಾಗೂ ಕೆಎಸ್ಸಾರ್ಟಿಸಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ಬಳಿಕ ಉಪ್ಪಿನಂಗಡಿ, ಸಕಲೇಶಪುರದ ಮೂಲಕ ಮದ್ದೂರಿಗೆ ತೆರಳುವರು ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಣ್ಣ ನೀರಾವರಿ ಸಚಿವರು: ರಾಜ್ಯ ಸಣ್ಣ ನೀರಾವರಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ನ.15 ಮತ್ತು 16ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ನ.15ರ ಸಂಜೆ 5:00ಕ್ಕೆ ಕುಂದಾಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವರು ನ.16ರ ಬೆಳಗ್ಗೆ 9 ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಮಂಗಳೂರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News