ನ.20-21: ಹೊಸಂಗಡಿ ಬದ್ರಿಯಾ ಜುಮಾ ಮಸೀದಿಯಲ್ಲಿ ಮಿಲಾದ್ ಆಚರಣೆ

Update: 2018-11-14 16:04 GMT

ಕುಂದಾಪುರ, ನ.14: ಹೊಸಂಗಡಿ ಬದ್ರಿಯಾ ಜುಮಾ ಮಸೀದಿಯ ವತಿಯಿಂದ ಈದ್ ಮಿಲಾದ್ ಆಚರಣೆ ಹಾಗೂ ಸ್ವಲಾತ್ ವಾರ್ಷಿಕೋತ್ಸವವು ನ. 20 ಮತ್ತು 21ರಂದು ನಡೆಯಲಿದೆ.

ನ. 20ರಂದು ಸಂಜೆ ಆರು ಗಂಟೆಗೆ ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂ.ಎಸ್.ಎಂ.ಅಬ್ದುಲ್ ರಶೀದ್ ಸಖಾಫಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದು, 21ರಂದು ಸಂಜೆ 6ಗಂಟೆಗೆ ಕೋಟೇಶ್ವರ ಸಯ್ಯದ್ ಜಅಫರ್ ಅಸ್ಸಖಾಫ್ ತಂಙಳ್ ನೇತೃತ್ವದಲ್ಲಿ ಸ್ವಲಾತ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News