ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-11-14 16:11 GMT

ಕಾರ್ಕಳ, ನ.14: ವೈಯಕ್ತಿಕ ಕಾರಣದಿಂದ ಮನನೊಂದ ಸುಕುಮಾರ ಆಚಾರ್ಯ (38) ಎಂಬವರು ನ.13ರಂದು ಬೆಳಗ್ಗೆ ತಾನು ವಾಸವಾಗಿ ರುವ ಬಾಡಿಗೆ ಮನೆಯ ಕೋಣೆಯಲ್ಲಿ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ತೆಗ್ಗರ್ಸೆ ಗ್ರಾಮದ ನಿರೋಡಿ ನಿವಾಸಿ ರಾಮ ಮರಾಠಿ(26) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.12ರಂದು ರಾತ್ರಿ ಮನೆಯ ಸಮೀಪದ ಹಳ್ಳಿಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News