ಅತ್ಯುತ್ತಮ ಸಾಧನಾ ಪ್ರಶಸ್ತಿಗೆ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಯ್ಕೆ

Update: 2018-11-14 16:23 GMT

ಭಟ್ಕಳ, ನ. 14: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ, ರಾಜ್ಯದ ಅತ್ಯುತ್ತಮ ಅರ್ಬನ್ ಕೋ-ಆಪರೇಟಿವ್ ಬ್ಯಾಂಕು ಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕನ್ನು ಅತ್ಯುತ್ತಮ ಸಾಧನಾ ಪ್ರಶಸ್ತಿ  ಗೆ 65 ನೇ ಅಖಿಲ ಭಾರತ ಸಹಕಾರ ಸಪ್ತಾಹ 2018, ಆಚರಣಾ ಸಮಿತಿ, ಶಿರಸಿ ಇವರು ಆಯ್ಕೆ ಮಾಡಿರುತ್ತಾರೆ.

ಈ ಪ್ರಶಸ್ತಿಗೆ ಆಯ್ಕೆಗೊಂಡ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅಬ್ದುಲ ಮಜೀದ ಚೌಗುಲೆಯವರು ಸಹಕಾರ ಇಲಾಖೆ, ಕೆ.ಡಿ.ಸಿ.ಸಿ. ಬ್ಯಾಂಕ್, ಶಿರಸಿ, ತೋಟಗಾರ್ಸ ಸೇಲ್ಸ ಕೋ-ಆಪ. ಸೊಸೈಟಿ ಲಿ., ಶಿರಸಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರ ನೇತೃತ್ವದಲ್ಲಿ ನ. 21 ರಂದು ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್, ಶಿರಸಿಯಲ್ಲಿ ನಡೆಯಲಿರುವ 65 ನೇ ಅಖಿಲ ಭಾರತ ಸಹಕಾರ ಸಪ್ತಾಹ-2018 ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಬ್ಯಾಂಕಿನ ಪ್ರಧಾನ ಕಾರ್ಯನಿರ್ವಾಹಕ  ಎಸ್.ಎ. ರಝಾಕ್ ಅವರು ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News