ಅಕ್ರಮ ದನ ಸಾಗಾಟ: ವಾಹನ ಸಹಿತ ಇಬ್ಬರು ಆರೋಪಿಗಳು ಸೆರೆ

Update: 2018-11-14 16:47 GMT

ಬಂಟ್ವಾಳ, ನ.14: ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನ ಸಹಿತ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಕೊಡಿಂಬಾಡಿ ಗ್ರಾಮದ ನಿವಾಸಿ ಪ್ರವೀಣ್ ನಾಯಕ್ (28) ಹಾಗೂ ಪಡ್ನೂರು ಗ್ರಾಮದ ನಿವಾಸಿ ಜಗದೀಶ ಹೆಗಡೆ (32) ಬಂಧಿತ ಆರೋಪಿಗಳು. ಬಂಧಿತರಿಂದ ವಾಹನ, ಒಂದು ದನ ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ 1.65 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ

ಸಾಲೆತ್ತೂರು ಮಾರ್ಗವಾಗಿ ಕೇರಳ ಕಡೆಗೆ ವಾಹನವೊಂದರಲ್ಲಿ ದನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣೆ ಎಸ್ಸೈ ಯಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಸೇತುವೆ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದು, ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News