ನ.18: ಕಾಡುಜೇಡು, ಬಾತುಕೋಳಿ ಹೂ ಕೃತಿ ಬಿಡುಗಡೆ

Update: 2018-11-14 16:53 GMT

ಬೆಂಗಳೂರು, ನ.14: ಕವಯತ್ರಿ ಎಚ್.ಆರ್.ಸುಜಾತಾರವರ ‘ಕಾಡುಜೇಡ ಹಾಗೂ ಬಾತುಕೋಳಿ ಹೂ’ ಕೃತಿಯ ಬಿಡುಗಡೆ ಕಾರ್ಯಕ್ರಮವು ನ.18ರಂದು ಸಂಜೆ 6ಕ್ಕೆ ಸಂಸ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ ದಾಸ್ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ. ಕೃತಿಯ ಕುರಿತು ನಾಟಕಕಾರ ಕೆ.ವೈ.ನಾರಾಯಣ ಸ್ವಾಮಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎಲ್.ಶಂಕರ್ ವಹಿಸಲಿದ್ದಾರೆ. ಈ ವೇಳೆ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಪ್ರಕಾಶಕ ಪಲ್ಲವ ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News