ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Update: 2018-11-14 17:05 GMT
ಬಂಟ್ವಾಳ, ನ. 14: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಪೊಲೀಸರು ಕೇರಳದ ಎರ್ನಾಕುಲಂ ಎಂಬಲ್ಲಿ ಬುಧವಾರ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ತಲಂಗೆರೆ ನಿವಾಸಿ ಶಂಶುದ್ದೀನ್ (33) ಎಂಬಾತನನ್ನು ಬಂಧಿಸಿದ್ದು, ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗುವುದು ಎಂದು ಪೊಲೀಸರು ತಿಳಿಸಿದ್ದಾರೆ.