ಚಿಕ್ಕಮಗಳೂರು: ಆಣೂರು ಸರಕಾರಿ ಶಾಲೆ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

Update: 2018-11-14 17:53 GMT

ಚಿಕ್ಕಮಗಳೂರು, ನ.14: ತಾಲೂಕಿನ ಆಣೂರು ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಐಶ್ವರ್ಯ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಆಣೂರಿನ ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಬಿ.ಶಿವಪ್ಪ ಅವರ ಮಗಳಾದ ಐಶ್ವರ್ಯ ಸಾಧನೆಗೆ ಶಾಲೆಯ ಮುಖ್ಯೋಪಧ್ಯಾಯರು, ಶಿಕ್ಷಕರು ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷ ನಸ್ರತ್‍ ಆಲಿ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚೇತನ್‍ ಗೌಡ, ಮುಖ್ಯೋಪಧ್ಯಾಯ ತಮ್ಮಯ್ಯ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News