ಮಂಡ್ಯ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಬಾಲಕ

Update: 2018-11-14 18:04 GMT

ಮಂಡ್ಯ, ನ.14: ಬಾಲಕನೊಬ್ಬ ಕಾಲು ತೊಳೆಯಲು ಹೋಗಿ ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.

ವಿನೋದ್‍ಕುಮಾರ್(15) ಕೊಚ್ಚಿಹೋದ ಬಾಲಕ. ಈತ ಹೇಮಾವತಿ ನದಿಯ ಮಂದಗೆರೆ ಬಲದಂಡೆ ನಾಲೆಗೆ ಕೈಕಾಲು ತೊಳೆಯಲು ಇಳಿದಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News