ಮುಂದಿನ ಲೋಕಸಭೆ ಚುನಾವಣೆ ಮುಗಿಯುವ ತನಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ

Update: 2018-11-15 06:51 GMT

ಬೆಂಗಳೂರು, ನ.15: ಮುಂಬರುವ ಲೋಕಸಭಾ ಚುನಾವಣೆ ಮುಗಿಯುವ ತನಕ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ  ಎಂಬ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾರ್ಗದರ್ಶನದಲ್ಲೇ  ಯುವಕರಿಗೆ ಪಟ್ಟ ಕಟ್ಟಲಾಗುವುದು ಎಂದು ತಿಳಿದು ಬಂದಿದೆ.

ಬುಧವಾರ ಮಂಗಳೂರಿನಲ್ಲಿ ನಡೆದ ಆರ್ ಎಸ್ ಎಸ್ ಬೈಠಕ್ ನಲ್ಲೂ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಚಾರ ಚರ್ಚೆಗೆ ಬಂದಿದ್ದು, ಅಧ್ಯಕ್ಷರ ಬದಲಾವಣೆಗೆ ವಿರೋಧ ಕಂಡು ಬಂದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ  ಬಿಜೆಪಿ ಅಧ್ಯಕ್ಷರ ಬದಲಾವಣೆಯ  ಬಿಜೆಪಿ  ಮತ್ತು ಆರ್ ಎಸ್ ಎಸ್ ಮುಖಂಡರ ಅಭಿಪ್ರಾಯ ಕೇಳಿದ್ದಾರೆ. ಲೋಕಸಭೆಯ ಚುನಾವಣೆ ಮುಗಿಯುವ ತನಕ ಅಧ್ಯಕ್ಷರ ಬದಲಾವಣೆ ಸೂಕ್ತವಲ್ಲ ಎಂಬ ಸಲಹೆಯನ್ನು ಅಮಿತ್ ಶಾಗೆ ಬಿಜೆಪಿ ಮುಖಂಡರು ನೀಡಿದ್ದಾರೆ ಎನ್ನಲಾಗಿದೆ. 

ಯುವ ನಾಯಕರಾದ ನಳೀನ್ ಕುಮಾರ್ ಕಟೀಲ್, ಸುನೀಲ್ ಕುಮಾರ್ ಮತ್ತು ಅರವಿಂದ ಲಿಂಬಾವಳಿ ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ ನಲ್ಲಿದ್ದಾರೆ.  ಇವರಲ್ಲಿ ಒಬ್ಬರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಅಮಿತ್ ಶಾ ತಂತ್ರ ರೂಪಿಸಿದ್ದಾರೆ.  ಆದರೆ ಅಮಿತ್ ಶಾ ಅವರು ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News