ಸುಪಾರಿ ಹತ್ಯೆ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ರವಿ ಬೆಳಗೆರೆ

Update: 2018-11-15 15:02 GMT

ಬೆಂಗಳೂರು, ನ.15: ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ಮತ್ತು ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಆರೋಪದ ಪ್ರಕರಣಗಳ ರದ್ದು ಕೋರಿ ಪತ್ರಕರ್ತ ರವಿ ಬೆಳಗೆರೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದೇ ಪ್ರಕರಣದಲ್ಲಿ ರವಿ ಬೆಳಗೆರೆಯನ್ನ ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ನ್ಯಾಯಾಲಯದಲ್ಲಿರುವ ಮೊಕದ್ದಮೆ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ.

ಅರ್ಜಿಯಲ್ಲಿ ಏನಿದೆ: ಪೊಲೀಸರಿಂದ ಸೆಷನ್ಸ್ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು ವಿಚಾರಣೆಗೆ ಬರಬೇಕಿದೆ. ಪ್ರಕರಣವು ಕಾನೂನು ಬಾಹಿರ, ಅಸಮಂಜಸ ಸಂಗತಿಗಳು ಮತ್ತು ಸಾಕ್ಷಾಧಾರಗಳ ಕೊರತೆಯಿಂದ ಕೂಡಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಹೈಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಕೆಯಾಗಿದ್ದು, ಶುಕ್ರವಾರ ಅಥವಾ ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News