ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ: ಗೌರಿ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಎಸ್‌ಐಟಿ ಕಸ್ಟಡಿಗೆ

Update: 2018-11-15 15:44 GMT

ಕೊಲಾಪುರ,ನ.15: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಬಂಧಿಸಿದ್ದ ಅಮೋಲ್ ಅರವಿಂದ ಕಾಳೆಯನ್ನು ಸೆಶನ್ಸ್ ನ್ಯಾಯಾಲಯ ಕಮ್ಯುನಿಸ್ಟ್ ನಾಯಕ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಿದೆ.

ಸೆಶನ್ಸ್ ನ್ಯಾಯಾಲಯ ನ್ಯಾಯಾಧೀಶ ಎಸ್.ಎಸ್.ರೌಲ್, ಅಮೋಲ್ ಕಾಳೆಯನ್ನು ನವೆಂಬರ್ 22ರ ವರೆಗೆ ಸಿಟ್ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ. ಪನ್ಸಾರೆ ಹತ್ಯೆಯಲ್ಲಿ ಕಾಳೆಯ ಪಾತ್ರದ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ ಎಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ತಿಳಿಸಿತ್ತು. ಪ್ರಗತಿಪರ ಚಿಂತಕ ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ ನಾಯಕ ಗೋವಿಂದ ಪನ್ಸಾರೆಯನ್ನು 2015ರ ಫೆಬ್ರವರಿಯಲ್ಲಿ ಅವರ ಮನೆ ಸಮೀಪ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News