ಗಾಂಜಾ ಮಾರಾಟ: ಮೂವರ ಬಂಧನ

Update: 2018-11-15 16:58 GMT

ಬೆಂಗಳೂರು, ನ.15: ಆಂಧ್ರಪ್ರದೇಶದ ಕರ್ನೂಲ್‌ನಿಂದ ಕಡಿಮೆ ಬೆಲೆಗೆ ಗಾಂಜಾವನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿ, 12 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕರ್ನೂಲ್‌ನ ವಿಷ್ಣುವರ್ಧನ(23), ರಾಜೇಶ್(22) ಹಾಗೂ ಗುರಪ್ಪನಪಾಳ್ಯದ ಜುನೇದ್ ಅಹ್ಮದ್(24)ಬಂಧಿತರು. ಆರೋಪಿಗಳಾದ ರಾಜೇಶ್ ಹಾಗೂ ವಿಷ್ಣುವರ್ಧನ ಕರ್ನೂಲ್‌ನಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ಮತ್ತೊಬ್ಬ ಆರೋಪಿ ಜುನೇದ್‌ನೊಂದಿಗೆ ಬಿಟಿಎಂ ಲೇಔಟ್, ಬನ್ನೇರುಘಟ್ಟ, ಮತ್ತಿತರ ಕಡೆಗಳಲ್ಲಿರುವ ಸಾಫ್ಟ್‌ವೇರ್ ಕಂಪೆನಿಗಳ ಉದ್ಯೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು.

ಗಿರಾಕಿಯೊಬ್ಬ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮೈಕೋ ಲೇಔಟ್ ಪೊಲೀಸ್ ಇನ್‌ಸ್ಪೆಕ್ಟರ್ ರವಿಪ್ರಕಾಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News