ಒಂದು ಕಿ.ಲೋ ಗಾಂಜಾ ವಶ; ಆರೋಪಿ ಬಂಧನ

Update: 2018-11-15 17:06 GMT

ಉಡುಪಿ, ನ.15: ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕರಾದ ಸೀತಾರಾಮ ಪಿ. ಅವರು ದೊರೆತ ಖಚಿತ ಮಾಹಿತಿ ಮೇರೆಗೆ ನಿನ್ನೆ ಅಪರಾಹ್ನ 12 ಗಂಟೆ ಸುಮಾರಿಗೆ ಶಿವಳ್ಳಿ ಗ್ರಾಮದ ಪೆರಂಪಳ್ಳಿ ರೈಲ್ವೆ ಸೇತುವೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಪ್ರವೀಣ್ ಡಿಸೋಜ ಎಂಬಾತನನ್ನು ಬಂಧಿಸಿದ್ದು, ಆತನಿಂದ ಮಾರಾಟ ಮಾಡಲು ಹೊಂದಿದ್ದ 1ಕಿಲೋ 214 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಗಾಂಜಾ ಮೌಲ್ಯ 42,000ರೂ. ಎಂದು ಆಂದಾಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ.ನಿಂಬರಗಿ ನಿರ್ದೇಶನದಲ್ಲಿ, ಎಎಸ್ಪಿ ಕುಮಾರ ಚಂದ್ರರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆ ಯಲ್ಲಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪಿಎಸ್‌ಐ ರಾಮಚಂದ್ರ ಭಟ್, ಎಎಸ್‌ಐ ಕೇಶವ ಗೌಡ ಹಾಗೂ ಸಿಬ್ಬಂದಿಗಳಾದ ಸತೀಶ್, ಕೃಷ್ಣಪ್ರಸಾದ್, ರಾಘವೇಂದ್ರ ಬ್ರಹ್ಮಾವರ, ರಾಘವೇಂದ್ರ ಉಪ್ಪೂರು ಹಾಗೂ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News