ಮೈಸೂರು: ಮೊಬೈಲ್ ಕಳೆದುಕೊಂಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Update: 2018-11-15 17:46 GMT
ಸಾಂದರ್ಭಿಕ ಚಿತ್ರ

ಮೈಸೂರು,ನ.15: ಮೊಬೈಲ್ ಕಳೆದುಹೋದ ವಿಷಯಕ್ಕೆ ಮನನೊಂದ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.

ಮೃತಳನ್ನು 16 ವರ್ಷದ ವಿದ್ಯಾರ್ಥಿನಿ ನಿಖಿತಾ ಎಂದು ಗುರುತಿಸಲಾಗಿದೆ. ಈಕೆ ಗಾಯಿತ್ರಿಪುರಂ ನಲ್ಲಿರುವ ಗಣಪತಿ ಸಚ್ಚಿದಾನಂದ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸಹೋದರ ಬಬ್ಲು ಜೊತೆ ನಿನ್ನೆ ಸಂಜೆ ಮಾತನಾಡಿದ್ದು, ಅಪ್ಪ ಕೊಟ್ಟ ನೆನಪಿನ ಮೊಬೈಲ್ ಕಳೆದು ಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News