​ನ.18ರಂದು ಮೀಲಾದ್ ಪ್ರತಿಭೋತ್ಸವ

Update: 2018-11-15 18:14 GMT

ಮಂಗಳೂರು, ನ.15: ಬದ್ರಿಯಾ ಜುಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಹೈಯರ್ ಸೆಕಂಡರಿ ಮದ್ರಸ, ಬಜಾಲ್ ನಂತೂರು ಆಶ್ರಯದಲ್ಲಿ ನ.18ರಂದು ಸಂಜೆ 5 ಗಂಟೆಗೆ ಬೃಹತ್ ಮೀಲಾದ್ ರ್ಯಾಲಿ, ಮೌಲಿದ್ ಪಾರಾಯಣ, ಮದ್ರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮ ನಡೆಯಲಿದೆ.

ಬಜಾಲ್ ನಂತೂರು ಮುದ್ರರಿಸ್ ಬಿ.ಜೆ.ಎಂ. ಇಲ್ಯಾಸ್ ಅಮ್ಜದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಸದರ್ ಮುಅಲ್ಲಿಂ ಅಬೂಬಕ್ಕರ್ ಮುಸ್ಲಿಯಾರ್ ಸ್ವಾಗತ ಭಾಷಣ ಮಾಡಲಿದ್ದಾರೆ.

ನ.19ರಂದು ಸಂಜೆ 6:30ಕ್ಕೆ ಮದ್ರಸ ವಿದ್ಯಾರ್ಥಿಗಳ ಪ್ರತಿಭಾ ಸಂಗಮ ಕಾರ್ಯಕ್ರಮವು ನೆರವೇರಲಿದೆ. 20ರಂದು ಬೆಳಗ್ಗೆ 4 ಗಂಟೆಗೆ ಬದ್ರಿಯಾ ಜುಮಾ ಮಸೀದಿಯಲ್ಲಿ ಮೌಲಿದ್ ಪಾರಾಯಣ ನಡೆಯಲಿದೆ.

ಅಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಬೆಳಗ್ಗೆ 8:15ಕ್ಕೆ ಬೃಹತ್ ಮೀಲಾದ್ ರ್ಯಾಲಿ, ಬೆಳಗ್ಗೆ 11 ಗಂಟೆಗೆ ಬೃಹತ್ ಮೌಲಿದ್ ಮಜ್ಲಿಸ್ ಹಾಗೂ ಅನ್ನ ಸಂತರ್ಪಣೆ, ಸಂಜೆ 5.30 ಗಂಟೆಗೆ ಮದ್ರಸ ಮಕ್ಕಳ ಪ್ರತಿಭೋತ್ಸವ ಹಾಗೂ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ ಎಂದು ಬದ್ರಿಯಾ ಜುಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಹೈಯರ್ ಸೆಕಂಡರಿ ಮದ್ರಸದ ಉಸ್ತುವಾರಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News