ಮಿಥುನ್ ರೈ ಅಮಾನತು ಆದೇಶ ಹಿಂಪಡೆದ ಅಖಿಲ ಭಾರತ ಯುವ ಕಾಂಗ್ರೆಸ್
Update: 2018-11-16 07:05 GMT
ಮಂಗಳೂರು, ನ.16: ಮಿಥುನ್ ರೈಯವರನ್ನು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿದ್ದ ಆದೇಶವನ್ನು ಅಖಿಲ ಭಾರತ ಯುವ ಕಾಂಗ್ರೆಸ್ ಹಿಂಪಡೆದಿದೆ.
ತಕ್ಷಣದಿಂದಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಅವರಿಗೆ ಸೂಚಿಸಲಾಗಿದೆ.
ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ ಹಾಗೂ ಪಕ್ಷದ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂಬ ಕಾರಣಗಳಿಗಾಗಿ ಮಿಥುನ್ ರೈ ಸಹಿತ ರಾಜ್ಯದ 10 ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು, ರಾಜ್ಯ ಯುವ ಕಾಂಗ್ರೆಸ್ನ ಎಂಟು ಕಾರ್ಯದರ್ಶಿಗಳನ್ನು ಹಾಗೂ ರಾಜ್ಯ ಯುವ ಕಾಂಗ್ರೆಸ್ನ ಒಬ್ಬ ಉಪಾಧ್ಯಕ್ಷನನ್ನು ಅಮಾನತುಗೊಳಿಸಿ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರವೀಂದ್ರದಾಸ್ ನ.5ರಂದು ಆದೇಶ ಹೊರಡಿಸಿದ್ದರು.
ಮಿಥುನ್ ರೈ ಸಹಿತ ಇತರ ಮೂವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿದುಬಂದಿದೆ.