ಹವ್ವಾ ನಸೀಮಾರಿಗೆ ಬಿಸಿಎಫ್ನಿಂದ ಸನ್ಮಾನ
Update: 2018-11-16 09:59 GMT
ಶಾರ್ಜಾ, ನ.16: ದುಬೈಯಲ್ಲಿ ನಡೆದ ‘ಅಂತಾರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್ ಸ್ಪರ್ಧೆ’ಯಲ್ಲಿ ಭಾರತದ ಏಕೈಕ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾರನ್ನು ಬ್ಯಾರೀಸ್ ಕಲ್ಚರಲ್ ಫೋರಂ(ಬಿಸಿಎಫ್) ವತಿಯಿಂದ ಸನ್ಮಾನಿಸಲಾಯಿತು.
ಶಾರ್ಜಾದ ಹೋಟೇಲ್ ಹಿಲ್ಟನ್ ಇಂಟರ್ನ್ಯಾಶನಲ್ ನಡೆದ ಸರಳ ಸಮಾರಂಭದಲ್ಲಿ ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್, ಪ್ರಧಾನ ಕಾರ್ಯದರ್ಶಿ ಕಾಪು ಮುಹಮ್ಮದ್, ಉಪಾಧ್ಯಕ್ಷರಾದ ಎಂ.ಇ.ಮೂಳೂರು, ಅಬ್ದುಲ್ಲತೀಫ್ ಮುಲ್ಕಿ ಹಾಗೂ ಬಿಸಿಎಫ್ನ ಇತರ ನಾಯಕರು ಉಪಸ್ಥಿತರಿದ್ದರು.