ನ. 17: ಎಸ್ಕೆಎಸ್ಸೆಸ್ಸೆಫ್ ಬೆಂಗಳೂರು ಸಮಿತಿಯ ವತಿಯಿಂದ ಮೀಲಾದ್ ಕಾನ್ಫರೆನ್ಸ್

Update: 2018-11-16 11:21 GMT

ಮಂಗಳೂರು, ನ. 16:  ಎಸ್ಕೆಎಸ್ಸೆಸ್ಸೆಫ್ ಬೆಂಗಳೂರು ಆಯೋಜಿಸುವ ಬೃಹತ್ ಮೀಲಾದ್ ಕಾನ್ಫರೆನ್ಸ್ ನ. 17ರಂದು ಸಂಜೆ 5 ಗಂಟೆಗೆ ಸರ್. ಪುಟ್ಟಾಣ್ಣ ಚೆಟ್ಟಿ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷ ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಲ್ ನಿರ್ವಹಿಸಲಿದ್ದಾರೆ. ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರಭಾಷಣಗಾರರಾಗಿ ಸಯ್ಯಿದ್ ನಜ್ಮುದ್ದೀನ್ ತಂಙಲ್ ಯಮಾನಿ ಆಗಮಿಸಲಿದ್ದಾರೆ.

ಪ್ರಖ್ಯಾತ ವಾಗ್ಮಿ ಉಸ್ತಾದ್ ಮುನೀರ್ ಹುದವಿ ವಿಳಯಿಲ್, ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಪ್ರೊ. ಅನೀಸ್ ಕೌಸರಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ರಾಮಲಿಂಗ ರೆಡ್ಡಿ, ಪಿ.ಸಿ.ಜಾಫರ್ ಐಎಎಸ್, ನಝೀರ್ ಅಹ್ಮದ್  ಹಾಗೂ ಇನ್ನಿತರ ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರುಗಳು ಆಗಮಿಸಲಿದ್ದಾರೆ. ಸಂಜೆ 4 ಕ್ಕೆ ಆಕರ್ಷಕ ಬುರ್ದಾ ಮಜ್ಲಿಸ್ ನಡೆಯಲಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಬೆಂಗಳೂರು ಚಾಪ್ಟರ್ ಅಧ್ಯಕ್ಷ ಅಸ್ಲಂ ಫೈಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News