ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಬರಹ: ಐವರ ವಿರುದ್ಧ ಪ್ರಕರಣ ದಾಖಲು

Update: 2018-11-16 14:38 GMT

ಹೊಸದಿಲ್ಲಿ, ನ.16: ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ ಆರೆಸ್ಸೆಸ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಾತ್ಮಕ ಪೋಸ್ಟ್ ಮಾಡಿರುವ ಆರೋಪದಲ್ಲಿ ಐವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರವ್ ಗುಪ್ತ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಣಾ ಸುಲ್ತಾನ್ ಜಾವೇದ್, ಝೀಶನ್, ಹಾರೂನ್ ಖಾನ್, ಶಫೀಕ್ ಹಾಗೂ ಕಿಂಗ್ ಖಾನ್ ಎಂಬವರ ವಿರುದ್ಧ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಅಜಯ್‌ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಳು ನವೆಂಬರ್ 14ರಂದು ಆದಿತ್ಯನಾಥ್ ಮತ್ತು ಆರೆಸ್ಸೆಸ್ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದು ತಕ್ಷಣ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News