ಜಗದಾತ್ಮಾನಂದ ಸ್ವಾಮೀಜಿ ನಿಧನಕ್ಕೆ ಯಡಿಯೂರಪ್ಪ ಸಂತಾಪ
Update: 2018-11-16 17:20 GMT
ಬೆಂಗಳೂರು, ನ.15: ‘ಬದುಕಲು ಕಲಿಯಿರಿ’ ಪುಸ್ತಕದ ಮೂಲಕ ಲಕ್ಷಾಂತರ ಯುವಕರಿಗೆ ಪ್ರೇರಣೆ ನೀಡಿದ್ದ ರಾಮಕೃಷ್ಣಾಶ್ರಮದ ಸ್ವಾಮಿ ಜಗದಾತ್ಮಾನಂದ್ಜೀ ನಿಧನರಾಗಿರುವುದು ತೀವ್ರ ನೋವಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.
ಶ್ರೇಷ್ಠ ವಾಗ್ಮಿಗಳಾಗಿಯೂ ಪ್ರಸಿದ್ಧರಾಗಿದ್ದ ಜಗದಾತ್ಮಾನಂದ್ ಜೀ, ದಿನಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಿದ್ದರು. ಅವರ ‘ಬದುಕಲು ಕಲಿಯಿರಿ’ ಕೃತಿಯು 9 ಭಾಷೆಗಳಿಗೆ ಅನುವಾದಗೊಂಡಿರುವುದು ಅವರ ಸಾಧನೆಗೆ ಸಾಕ್ಷಿ. ಅವರ ನಿಧನದಿಂದ ನಾಡು ಶ್ರೇಷ್ಠ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.