ಮಿತ್ತೂರ್: ಎಸ್ಸೆಸ್ಸೆಫ್ ವತಿಯಿಂದ ಮರ್ಹೂಂ ರಫೀಕ್ ಸಖಾಫಿ ಅನುಸ್ಮರಣಾ ಸಂಗಮ

Update: 2018-11-17 06:50 GMT

ಪುತ್ತೂರು, ನ. 17: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಮರ್ಹೂಂ ರಫೀಕ್ ಸಖಾಫಿ ಚೆರಿಯಪರಂಬು ರವರ ಅನುಸ್ಮರಣಾ ಸಂಗಮವು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಅಧ್ಯಕ್ಷತೆಯಲ್ಲಿ  ಕೆ.ಜಿ.ಎನ್ ಮಿತ್ತೂರಿನಲ್ಲಿ ನಡೆಯಿತು.

ಎಸ್.ವೈ.ಎಸ್ ಕರ್ನಾಟಕ ರಾಜ್ಯಾಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ  ಉದ್ಘಾಟಿಸಿದರು. ಎಸ್ಸೆಸ್ಸೆಫ್ ಕೇರಳ ರಾಜ್ಯಾಧ್ಯಕ್ಷ ಡಾ ಫಾರೂಕ್ ನ ಈಮಿ ಅಲ್ ಬುಖಾರಿ ಕೊಲ್ಲಂ ಅನುಸ್ಮರಣಾ ಭಾಷಣ ಮಾಡಿದರು. ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿಗಳಾದ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ, ಹಮೀದ್ ಮುಸ್ಲಿಯಾರ್ ನಗರ, ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ, ಎಸ್ಸೆಸ್ಸೆಫ್ ರಾಜ್ಯ ಸದಸ್ಯರಾದ ಹಾಫಿಳ್ ಯಾಕೂಬ್ ಸ ಅದಿ ನಾವೂರು, ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಕೆ.ಎಂ.ಮುಸ್ತಫಾ ನಈಮಿ ಸಖಾಫಿ, ಅಡ್ವಕೇಟ್ ಶಾಕಿರ್ ಹಾಜಿ ಮಿತ್ತೂರು, ಇಸ್ಮಾಯಿಲ್ ಝೈನಿ ಕೊಡಗು, ತಾಜುದ್ದೀನ್ ಫಾಳಿಲ್ ಬೆಂಗಳೂರು, ರವೂಫ್ ಖಾನ್ ಉಡುಪಿ, ನವಾಝ್ ಭಟ್ಕಳ್, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ, ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ, ಉಪಾಧ್ಯಕ್ಷ ಕೆ.ಎಂ.ಎಚ್ ಝುಹ್ರಿ ಕೊಂಬಾಳಿ, ಸದಸ್ಯರಾದ ಹಾಫಿಳ್ ಮಜೀದ್ ಫಾಳಿಲಿ ಗಾಣೆಮಾರ್, ರಶೀದ್ ಹಾಜಿ ವಗ್ಗ ಇನ್ನಿತರರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ ಸ್ವಾಗತಿಸಿದರು. ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಶಾಕಿರ್ ಹಾಜಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News