ತುಮಕೂರು ಮಾಜಿ ಮೇಯರ್ ಹತ್ಯೆ ಪ್ರಕರಣ: ಮತ್ತೊಬ್ಬ ಸಿಸಿಬಿ ವಶಕ್ಕೆ

Update: 2018-11-17 13:57 GMT

ಬೆಂಗಳೂರು, ನ.17: ತುಮಕೂರು ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಲಕ್ಷ್ಮೀ ನಾರಾಯಣ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಸೆ.30ರಂದು ತುಮಕೂರಿನಲ್ಲಿ ಮಾಜಿ ಮೇಯರ್ ರವಿಕುಮಾರ್ ಅವರ ಕೊಲೆಯಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಸುಜಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರವಿಕುಮಾರ್ ಕೊಲೆಯಾಗುವ ಮುನ್ನ ಸುಜಯ್ ಹಾಗೂ ಲಕ್ಷ್ಮೀ ನಾರಾಯಣ ಜೊತೆ ಡಾಬಾದಲ್ಲಿ ಮಾತುಕತೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ನಾರಾಯಣ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News