ತುಂಬೆ ಡ್ಯಾಂನಲ್ಲಿ ನೀರಿನ ಸಂಗ್ರಹ: ಮುನ್ನೆಚ್ಚರಿಕೆ

Update: 2018-11-17 14:50 GMT

ಮಂಗಳೂರು, ನ.17: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಮುಂದಿನ ಬೇಸಿಗೆ ಕಾಲಕ್ಕೆ ನೀರಿನ ಅಭಾವ ಬಾರದಂತೆ ಮುಂಜಾಗ್ರತಾ ಕ್ರಮವಾಗಿ ಹಾಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟವನ್ನು 6ಮೀಟರ್ ಎತ್ತರಕ್ಕೆ ನಿಲ್ಲಿಸಿ ಸಂಗ್ರಹಣೆ ಮಾಡಲು ಜಿಲ್ಲಾಧಿಕಾರಿಯ ಸೂಚನೆಯಂತೆ ನ.18 ಬೆಳಗ್ಗಿನಿಂದ ಕ್ರಮ ವಹಿಸಲಾಗಿದೆ.

ಅದರಂತೆ ತುಂಬೆ ಕಿಂಡಿ ಅಣೆಕಟ್ಟಿನ ಮುಳುಗಡೆ ಪ್ರದೇಶದಲ್ಲಿರುವ ಖಾಸಗಿ ಆಸ್ತಿಪಾಸ್ತಿ/ಸ್ವತ್ತುಗಳಿಗೆ ಹಾನಿ ಉಂಟಾಗುವ ಬಗ್ಗೆ ಎಚ್ಚರಿಕೆ ವಹಿಸುವಂತೆ ಹಾಗೂ ಸಾರ್ವಜನಿಕರು ನದಿದಡದಲ್ಲಿ ಸಂಚರಿಸುವಾಗ ಮುನ್ನೆಚ್ಚರಿಕೆ ವಹಿಸುವಂತೆ ಮಹಾನಗರಪಾಲಿಕೆ ಆಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News