ವಾಜಪೇಯಿ, ಸಿದ್ದರಾಮಯ್ಯ, ಝಮೀರ್ ಅಹ್ಮದ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

Update: 2018-11-17 15:22 GMT

ಮೈಸೂರು,ನ.17: ಮಲೈಮಹದೇಶ್ವರ ಸ್ವಾಮಿ, ಅಟಲ್ ಬಿಹಾರಿ ವಾಜಪೇಯಿ, ಸಿದ್ದರಾಮಯ್ಯ, ಝಮೀರ್ ಅಹ್ಮದ್ ಖಾನ್ ಹೆಸರಿನಲ್ಲಿ ನೂತನ ಪಾಲಿಕೆ ಸದಸ್ಯರು ಪ್ರಮಾಣವಚನ ಸ್ವೀಕರಿಸುವುದರ ಮೂಲಕ ಎಲ್ಲರ ಗಮನ ಸೆಳೆದರು.  

ಮೈಸೂರು ಮಹಾನಗರ ಪಾಲಿಕೆಗೆ ಆಯ್ಕೆಯಾದ ಸದಸ್ಯರಿಗೆ ಶನಿವಾರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳೂ ಆದ ಯಶವಂತ್ ಅವರಿಂದ ಪ್ರಮಾಣವಚನ ಬೋಧಿಸಲಾಯಿತು.

ಪಾಲಿಕೆ ಸದಸ್ಯೆ ಲಕ್ಷ್ಮಿ ಶಿವಣ್ಣ ಮಲೈ ಮಹದೇಶ್ವರಸ್ವಾಮಿ ಹೆಸರಿನಲ್ಲಿ, ಬಿಜೆಪಿಯ ಬಿ.ವಿ.ಮಂಜುನಾಥ್ ಅಟಲ್ ಬಿಹಾರಿ ವಾಜಪೇಯಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಾಗೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೆಸರಿನಲ್ಲಿ ಶೋಭಾ ಸುನೀಲ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಝಮೀರ್ ಅಹ್ಮದ್ ಖಾನ್ ಹೆಸರಿನಲ್ಲಿ ಪಾಲಿಕೆ ಸದಸ್ಯ ಸಮೀ ಅಹಮದ್ ಪ್ರಮಾಣ ವಚನ ಸ್ವೀಕರಿಸಿದರು. ಇನ್ನುಳಿದವರು ತಮ್ಮ ತಂದೆ ತಾಯಿ ಮತ್ತು  ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News