ಉಳ್ಳಾಲ ದರ್ಗಾಕ್ಕೆ ಸೈಯದ್ ಸೈಫುಲ್ಲ ಭೇಟಿ

Update: 2018-11-17 17:35 GMT

ಮಂಗಳೂರು, ನ.17: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಾಜಿ ಕಾರ್ಯದರ್ಶಿ ಸೈಯದ್ ಸೈಫುಲ್ಲ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆಗೈದರು.

ಈ ಸಂದರ್ಭ ಅಲ್ ಮದೀನ ಎಜುಕೇಶನ್ ಟ್ರಸ್ಟ್ ದಾವನೆಗೆರೆ ಪ್ರಾಂಶುಪಾಲ ಇಬ್ರಾಹೀಂ ಸಖಾಫಿ, ದರ್ಗಾ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹ, ಉಪಾಧ್ಯಕ್ಷ ಯು.ಕೆ. ಮೋನು ಇಸ್ಮಾಯೀಲ್, ಅರಬಿಕ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಜಿ ಅಮೀರ್, ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News